ಬೆಳಗಾವಿ: ‘ನಗರವೂ ಸೇರಿದಂತೆ ಜಿಲ್ಲೆಯ ಯಾವುದೇ ಕಡೆಗಳಿಗೂ ಸಾರಿಗೆ ಬಸ್ಗಳ ಸಂಚಾರಕ್ಕೆ ಲಾಕ್ಡೌನ್ನಿಂದ ವಿನಾಯಿತಿ ಸಿಕ್ಕಿಲ್ಲ. ಹೀಗಾಗಿ ಮೇ 4ರಿಂದ ಬಸ್ಗಳ ಕಾರ್ಯಾಚರಣೆ ಇರುವುದಿಲ್ಲ’ ಎಂದು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ ತಿಳಿಸಿದರು.
ಭಾನುವಾರ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ‘ಕೇಂದ್ರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯು ಕಿತ್ತಳೆ ವಲಯ (ಆರೆಂಜ್ ಝೋನ್)ದಲ್ಲಿದೆ. ಹೀಗಾಗಿ ಬಸ್ಗಳ ಸಂಚಾರಕ್ಕೆ ಅನುಮತಿ ಸಿಕ್ಕಿಲ್ಲ. ವಿಶೇಷ ಸಂದರ್ಭ ಹೊರತುಪಡಿಸಿದರೆ ಇಲ್ಲಿಗೆ ಬೇರೆ ಕಡೆಗಳಿಂದ ಬಸ್ಗಳು ಬರುವುದಕ್ಕೂ ಅವಕಾಶವಿಲ್ಲ’ ಎಂದು ಹೇಳಿದರು.
‘ಬಸ್ಗಳನ್ನು ಸ್ಯಾನಿಟೈಸ್ ಮಾಡಿ ಸಿದ್ಧತೆ ನಡೆಸಲಾಗುತ್ತಿದೆ. ಸರ್ಕಾರದಿಂದ ಆದೇಶ ಬಂದ ಕೂಡಲೇ ಕಾರ್ಯಾಚರಣೆ ಆರಂಭಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.