ಬೆಳಗಾವಿ: ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಗುರುವಾರ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.
ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು.ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು ಬಳಸಲಾಗುವುದು ಎಂದು ಸವದಿ ವಿವರಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ವಿಧಾನಪರಿಷತ್ತಿನ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.