ADVERTISEMENT

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: 3 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 12:11 IST
Last Updated 24 ಅಕ್ಟೋಬರ್ 2020, 12:11 IST

ಬೆಳಗಾವಿ: ಇಲ್ಲಿ ನ. 6ರಂದು ನಡೆಯಲಿರುವ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ಆಡಳಿತ ಮಂಡಳಿ ಚುನಾವಣೆಗೆ ಈವರೆಗೆ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

‘ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ರಾಮದುರ್ಗ ಪಿಕೆಪಿಎಸ್‌ನ ಶ್ರೀಕಾಂತ ಢವಣ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನೇಕಾರ ಸಹಕಾರ ಸಂಘಗಳ ಕ್ಷೇತ್ರದಿಂದ ತಾಲ್ಲೂಕಿನ ಶಿಂದೊಳ್ಳಿಯ ಕೃಷ್ಣ ರಾಮನಿಂಗ ಅನಗೋಳಕರ ಮತ್ತು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬೈಲಹೊಂಗಲ ತಾಲ್ಲೂಕು ತಿಗಡಿಯ ಆನಂದ ಜಗದೀಶ ಜಕಾತಿ ಎನ್ನುವವರು ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಚುನಾವಣಾಧಿಕಾರಿ ಸಯೀದಾ ಅಫ್ರೀನಬಾನು ಎಸ್. ಬಳ್ಳಾರಿ ತಿಳಿಸಿದ್ದಾರೆ.

ಉಮೇದುವಾರಿಕೆ ಸಲ್ಲಿಸಲು ಅ.29ರವರೆಗೂ ಅವಕಾಶವಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.