ADVERTISEMENT

ಬೆಳಗಾವಿ: 30 ಮಂದಿಗೆ ಕ್ವಾರಂಟೈನ್‌ ಮಾಡಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ

​ಪ್ರಜಾವಾಣಿ ವಾರ್ತೆ
Published 26 ಮೇ 2020, 15:16 IST
Last Updated 26 ಮೇ 2020, 15:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ‘ಜಾರ್ಖಂಡ್‌ನಿಂದ ವಾಪಸಾದ ಅಥಣಿ ತಾಲ್ಲೂಕಿನ 13 ಮಂದಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಅವರ ಪ್ರಥಮ ಸಂಪರ್ಕಕ್ಕೆ ಬಂದಿರುವ ಕುಟುಂಬಗಳ 30 ಮಂದಿಯನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದರು.

‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಹೊರ ರಾಜ್ಯದಿಂದ ಬಂದ ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿತ್ತು. ಅವರು ವಿವಿಧೆಡೆ ಸುತ್ತಾಡಿದ್ದಾರೆ ಎನ್ನುವ ಮಾತುಗಳು ಅಲ್ಲಿನ ಜನರಿಂದ ಕೇಳಿಬಂದಿರುವುದರಿಂದ ಸಮಗ್ರವಾಗಿ ಪರಿಶೀಲಿಸಲಾಗುವುದು. ದ್ವಿತೀಯ ಸಂಪರ್ಕಕ್ಕೆ ಬಂದಿರುವವರನ್ನು ಕೂಡ ಕ್ವಾರಂಟೈನ್ ಮಾಡಲು ಕ್ರಮ ವಹಿಸಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT