ADVERTISEMENT

ಖಾನಾಪುರದಲ್ಲಿ ಅಪಘಾತ: ಹೊತ್ತಿ ಉರಿದ ಸಾರಿಗೆ ಬಸ್

ಬೆಳಗಾವಿ-ಗೋವಾ ರಸ್ತೆ ಸಂಚಾರ 8 ತಾಸು ಬಂದ್‌

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 4:47 IST
Last Updated 24 ಸೆಪ್ಟೆಂಬರ್ 2019, 4:47 IST
   

ಬೆಳಗಾವಿ: ಖಾನಾಪುರ ತಾಲ್ಲೂಕಿನ ಕಾಲಮನಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ಸೋಮವಾರ ಮಧ್ಯರಾತ್ರಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ‌ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಪಣಜಿಯಿಂದ ಹುಬ್ಬಳ್ಳಿ-ಗದಗ ಮಾರ್ಗವಾಗಿ ಮುಂಡರಗಿಗೆ ಹೊರಟಿದ್ದ ಮುಂಡರಗಿ ಘಟಕಕ್ಕೆ ಸೇರಿದ ರಾಜ್ಯ ಸಾರಿಗೆ ಬಸ್ ಇದಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ ತೆರಳಿ ಸತತ 5 ಗಂಟೆ ಕಾರ್ಯಾಚರಣೆ ನಡೆಸುವ ಮೂಲಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ADVERTISEMENT

ಅಪಘಾತದ ಪರಿಣಾಮ ಬೆಳಗಾವಿ- ಗೋವಾ ನಡುವೆ ಎಂಟು ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಖಾನಾಪುರ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.