ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ ಬೀಳುತ್ತಿದೆ.
ಗುರುವಾರ ರಾತ್ರಿಯಿಂದಲೂ ವರ್ಷಧಾರೆ ಮುಂದುವರಿದಿದೆ. ಇದರಿಂದ ಜನ ಜೀವನದ ಮೇಲೆ ಪರಿಣಾಮ ಉಂಟಾಗಿದೆ.
ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಮುಂಜಾನೆ ವಿವಿಧೆಡೆ ಸಂಚರಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕೆಲವೆಡೆ ರಸ್ತೆಗಳಲ್ಲಿ ನೀರು ಸಂಗ್ರಹವಾಗಿದೆ. ಮನೆಗಳಿಗೆ ನೀರು ನುಗ್ಗಿಲ್ಲ. ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.