ADVERTISEMENT

ಬೆಳಗಾವಿ: ತುಂತುರು ಮಳೆಯಲ್ಲೇ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 3:45 IST
Last Updated 15 ಆಗಸ್ಟ್ 2020, 3:45 IST
ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ
ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್‌ ಜಾರಕಿಹೊಳಿ   

ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮ ತುಂತುರು ಮಳೆಯ ನಡುವೆಯೂ ಸಂಭ್ರಮದಿಂದ ನೆರವೇರಿತು.

ಕೊರೊನಾ ಕಾರಣದಿಂದ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳಲಿಲ್ಲ. ಅಧಿಕಾರಿಗಳು, ಪೊಲೀಸರು, ಮಾಧ್ಯಮ ಪ್ರತಿನಿಧಿಗಳಷ್ಟೇ ಪಾಲ್ಗೊಂಡಿದ್ದರು.

ತುಂತುರು ಮಳೆಯ ನಡುವೆಯೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ತೆರೆದ ವಾಹನದಲ್ಲಿ ತೆರಳಿ ತಂಡಗಳ ಪರಿವೀಕ್ಷಣೆ ನಡೆಸಿದರು.

ADVERTISEMENT

ಪೊಲೀಸರು, ಅಬಕಾರಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ತುಕಡಿಗಳಷ್ಟೇ ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಕೊರೊನಾ ಭೀತಿಯ ಕಾರಣದಿಂದ ಶಾಲಾ- ಕಾಲೇಜು ಮಕ್ಕಳಿಗೆ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.