ADVERTISEMENT

ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದ್ದ ತಾಳೂಕರ ಅಂಗಡಿ ಸುಡಲು ಯತ್ನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2021, 17:02 IST
Last Updated 1 ಜನವರಿ 2021, 17:02 IST
ತಾಳೂಕರ ಅಂಗಡಿ
ತಾಳೂಕರ ಅಂಗಡಿ   

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಮುಂಭಾಗ ಈಚೆಗೆ ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಬಾವುಟ ಹಾರಿಸಿದ್ದ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ ಅವರ ಅಂಗಡಿಗೆ ಕಿಡಿಗೇಡಿಗಳು ಶುಕ್ರವಾರ ಬೆಳಗಿನ ಜಾವ 2ರ ಸುಮಾರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಿದ್ದಾರೆ.

ಶಹಾಪುರದಲ್ಲಿ ಅವರ ಮನೆ ಸಮೀಪದಲ್ಲೇ ಕನ್ನಡ ಬಾವುಟಗಳು, ಶಲ್ಯಗಳನ್ನು ಮಾರುವ ಅಂಗಡಿ ಇದೆ. ಅದರ ಬಾಗಿಲಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ತಕ್ಷಣ ಗಮನಿಸಿದ ತಾಳೂಕರ ಕುಟುಂಬದವರು ಅನಾಹುತ ತಪ್ಪಿಸಿದರು.

ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರತಿಕ್ರಿಯಿಸಿದ ಶ್ರೀನಿವಾಸ, ‘ನಾನು ಎಂದಿಗೂ ಭಾಷಾ ದ್ವೇಷ ಮಾಡಿಲ್ಲ. ಇಂತಹ ಬೆದರಿಕೆಗೆ ಹಾಗೂ ಬೆಂಕಿ ಹಚ್ಚಿದ್ದಕ್ಕೆ ಹೆದರುವುದಿಲ್ಲ. ವೈಯಕ್ತಿಕ ಹಿತಾಸಕ್ತಿಗಾಗಿ ನಾನು ಹೋರಾಟ ಮಾಡುತ್ತಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.