ಚಿಕ್ಕೋಡಿ: ಲೋಕಸಭೆಗೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುರಿತು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೆಟ್ಟಿಂಗ್ ಅವ್ಯಾಹತವಾಗಿ ನಡೆದಿದೆ. ಪಟ್ಟಣದ ಮದ್ಯದ ಅಂಗಡಿ ಎದುರು ಸೋಮವಾರ ಇಬ್ಬರು ಕಾರ್ಯಕರ್ತರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಈ ಬಾರಿ ಕಾಂಗ್ರೆಸ್ನ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎರಡೂ ಕಡೆಯ ಅಭಿಮಾನಿಗಳು ಸಾವಿರ, ಹತ್ತು ಸಾವಿರ, ಲಕ್ಷ ಹೀಗೆ ಬೆಟ್ಟಿಂಗ್ ಕಟ್ಟಿದ್ದಾರೆ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿವೆ. ಇದೇ ಕಾರಣಕ್ಕೆ ಸೋಮವಾರ ಇಬ್ಬರು ಕಾರ್ಯಕರ್ತರ ಮಧ್ಯೆ ಜಗಳ ನಡೆದಿದೆ. ಈ ಬಗ್ಗೆ ಇಬ್ಬರೂ ದೂರು ಕೊಟ್ಟಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.