ಬೆಳಗಾವಿ: ಇಲ್ಲಿನ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡ ಶುಭಂ ಶೆಳಕೆ, ‘ಸಂಯುಕ್ತ ಮಹಾರಾಷ್ಟ್ರ ಪರಿಕಲ್ಪನೆ’ಯ ನಕ್ಷೆಯನ್ನು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡುವ ಮೂಲಕ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಗಡಿ ವಿವಾದವನ್ನು ಕೆಣಕಿದ್ದಾರೆ.
ಬೆಳಗಾವಿ, ಕಾರವಾರ, ಹಳ್ಯಾಳ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿದ್ದೆಂಬ ವಿವಾದಿತ ನಕ್ಷೆಯ ಫೋಟೊ ಪೋಸ್ಟ್ ಮಾಡಿದ್ದಾರೆ. ನ.1 ನಮ್ಮ ಪಾಲಿಗೆ ಕರಾಳ ದಿನ ಎಂದು ಬರೆದಿದ್ದಾರೆ.
ಇದನ್ನು ಎಂಇಎಸ್ ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡುತ್ತಿದ್ದಾರೆ. ಅವರ ವಾಟ್ಸ್ ಆ್ಯಪ್ ಗ್ರೂಪ್ಗಳಲ್ಲೂ ಹರಿದಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.