ADVERTISEMENT

ಬೆಳಗಾವಿ: ತಗ್ಗಿದ ಮಳೆ; ಇಳಿದ ನದಿಗಳ ಅಬ್ಬರ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 5:51 IST
Last Updated 10 ಆಗಸ್ಟ್ 2020, 5:51 IST
ಬೆಳಗಾವಿ ಜಿಲ್ಲೆಯ ಪಾಶ್ಚಾಪೂರ ಗ್ರಾಮದ ಸೇತುವೆ ಸಂಪೂರ್ಣವಾಗಿ ಮುಳುಗಿದ್ದ ದೃಶ್ಯ
ಬೆಳಗಾವಿ ಜಿಲ್ಲೆಯ ಪಾಶ್ಚಾಪೂರ ಗ್ರಾಮದ ಸೇತುವೆ ಸಂಪೂರ್ಣವಾಗಿ ಮುಳುಗಿದ್ದ ದೃಶ್ಯ   

ಬೆಳಗಾವಿ: ಜಿಲ್ಲೆಯೂ ಸೇರಿದಂತೆ ಗಡಿಗೆ ಹೊಂದಿಕೊಂಡಿರುವ ನೆರೆಯ ಮಹಾರಾಷ್ಟ್ರದಲ್ಲಿ ಸೋಮವಾರ ಮಳೆಯ ರಭಸ ತಗ್ಗಿದೆ. ಕೃಷ್ಣಾ ಹಾಗೂ ಉಪನದಿಗಳ ಹರಿವೂ ಕಡಿಮೆಯಾಗಿದೆ.

ಕೃಷ್ಣಾ ಹರಿವು ಕಡಿಮೆಯಾಗಿದೆ. ರಾಜಾಪುರ ಬ್ಯಾರೇಜ್‌ ಮೂಲಕ 1.20 ಲಕ್ಷ ಕ್ಯುಸೆಕ್‌, ದೂಧ್‌ಗಂಗಾ ನದಿಯಿಂದ 31,504 ಕ್ಯುಸೆಕ್‌ ಸೇರಿದಂತೆ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.51 ಲಕ್ಷ ಕ್ಯುಸೆಕ್‌ ನೀರು ಸೇರಿಕೊಳ್ಳುತ್ತಿದೆ.

ವೇದಗಂಗಾ, ದೂಧ್‌ಗಂಗಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ನದಿಗಳ ಹರಿವು ಕಡಿಮೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.