ಬೆಳಗಾವಿ: ನಗರದ ಖಡಕ್ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ನಡೆದ ಉರುಸ್ ಮೆರವಣಿಗೆಯಲ್ಲಿ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪೆಟ್ಟಾಗಿಲ್ಲ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಇಲ್ಲಿನ ಮೆಹಬೂಬ್ ಸುಬಾನಿ ದರ್ಗಾದ ಉರುಸ್ ಪ್ರತಿವರ್ಷ ಶನಿವಾರ ಕೂಟ, ಜಾಲ್ಗಾರ ಗಲ್ಲಿ ಮೂಲಕ ಸಾಗಿ ದರ್ಗಾಕ್ಕೆ ಹೋಗುತ್ತಿತ್ತು.
ಈ ವರ್ಷ ಅನುಮತಿ ಇಲ್ಲದೇ ಖಡಕ್ ಗಲ್ಲಿಗೆ ಮೆರವಣಿಗೆ ಬಂದಿತು. ಮೆರವಣಿಗೆ ವೇಳೆ ಮುಸ್ಲಿಂ ಯುವಕರು "ಐ ಲವ್ ಮೊಹಮ್ಮದ್" ಎಂಬ ಘೋಷಣೆ ಕೂಗಿದರು.
ಯಾವಾಗಲೂ ಬಾರದ ಮೆರವಣಿಗೆ ಈಗ ಏಕೆ ಖಡಕ್ ಗಲ್ಲಿಗೆ ಬಂದಿದೆ ಎಂದು ಅಲ್ಲಿನ ಹಿಂದೂ ಯುವಕರು ಪ್ರಶ್ನೆ ಮಾಡಿದರು. ಆಗ ಕತ್ತಲಿನಿಂದ ಕಲ್ಲುಗಳು ತೂರಿಬಂದವು.
ಸ್ಥಳಕ್ಕೆ ಡಿಸಿಪಿ ನಾರಾಯಣ ಭರಮನಿ, ಇಬ್ಬರು ಡಿಸಿಪಿ ಹಾಗೂ ಪೊಲೀಸರ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು.
ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಾತಾವರಣ ತಿಳಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.