ಐಐಟಿ ಖರಗಪುರ: ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ
ಬೆಳಗಾವಿ: ತಾಲ್ಲೂಕಿನ ಮೋದಗಾ ಗ್ರಾಮದ ಮನೆಯಲ್ಲಿ ಸೋಮವಾರ ತಡರಾತ್ರಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವೀಂದ್ರ ಈರನಗೌಡ ಹಟ್ಟಿಹೊಳಿ(24) ಮೃತರು.
‘ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್(ಎಂಸಿಎ) ಓದಿದ್ದ ರವೀಂದ್ರ, ಮಹಾರಾಷ್ಟ್ರದ ಪುಣೆಯ ಖಾಸಗಿ ಕಂಪನಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಕೆಲಸದಿಂದ ತೆಗೆದಿದ್ದಕ್ಕೆ ತವರಿಗೆ ಮರಳಿ ಮಾನಸಿಕವಾಗಿ ಕುಗ್ಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.