ADVERTISEMENT

‘ಕನ್ನಡ ಸಂಘಟನೆಗಳು ನಾಲಾಯಕ್‌’ ಎಂದಿದ್ದ ಬೆಳಗಾವಿ MES ಮುಖಂಡ ಶುಭಂ ಶೆಳಕೆ ಬಂಧನ

ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಹಾಗೂ ಕನ್ನಡ ವಿರೋಧಿಗಳನ್ನು ಸನ್ಮಾನಿಸಿದ ಆರೋಪದ ಮೇಲೆ ಎಂಇಎಸ್‌ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2025, 15:57 IST
Last Updated 24 ಮಾರ್ಚ್ 2025, 15:57 IST
<div class="paragraphs"><p>ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಹಾಗೂ ಕನ್ನಡ ವಿರೋಧಿಗಳನ್ನು ಸನ್ಮಾನಿಸಿದ ಆರೋಪದ ಮೇಲೆ ಎಂಇಎಸ್‌ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.</p></div>

ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಹಾಗೂ ಕನ್ನಡ ವಿರೋಧಿಗಳನ್ನು ಸನ್ಮಾನಿಸಿದ ಆರೋಪದ ಮೇಲೆ ಎಂಇಎಸ್‌ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.

   

ಬೆಳಗಾವಿ: ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಹಾಗೂ ಕನ್ನಡ ವಿರೋಧಿಗಳನ್ನು ಸನ್ಮಾನಿಸಿದ ಆರೋಪದ ಮೇಲೆ ಎಂಇಎಸ್‌ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.

ಈಚೆಗೆ ಬೆಳಗಾವಿ ಬಳಿ ಬಸ್‌ ನಿರ್ವಾಹಕನ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶುಭಂ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಸಮರ್ಥಿಸಿಕೊಂಡದ್ದರು. ‘ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು ನಾಲಾಯಕ್‌’ ಎಂದು ವಿವಾದಾತ್ಮಕವಾಗಿ ಹೇಳಿಕೆ ಕೊಟ್ಟು, ಕನ್ನಡಿಗರು ಮತ್ತು ಮರಾಠಿಗರ ನಡುವಿನ ಸೌಹಾರ್ದತೆ ಕದಡಲು ಯತ್ನಿಸಿದ್ದರು ಎಂಬ ಆರೋಪದಡಿ ಮಾಳಮಾರುತಿ ಠಾಣೆಯಲ್ಲಿ ಸ್ವಯಂ‍‍ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು.

ADVERTISEMENT

ಅಲ್ಲದೇ, ಮರಾಠಿ ಭಾಷೆಯಲ್ಲಿಯೇ ಮಾತನಾಡುವಂತೆ ಕಿಣಿಯೆ ಗ್ರಾಮದ ಪಿಡಿಒಗೆ ಬೆದರಿಕೆ ಹಾಕಿದ ತಿಪ್ಪಣ್ಣ ಡೋಕ್ರೆ ಎಂಬಾತನನ್ನು ಸನ್ಮಾನಿಸಿದ್ದರು. ಮೇಲಿಂದ ಮೇಲೆ ಕನ್ನಡ ವಿರೋಧಿ ಹಾಗೂ ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.