ADVERTISEMENT

ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2022, 13:07 IST
Last Updated 22 ಫೆಬ್ರುವರಿ 2022, 13:07 IST
ಡಾ.ಸಿ.ಎನ್. ರಾಮಚಂದ್ರನ್
ಡಾ.ಸಿ.ಎನ್. ರಾಮಚಂದ್ರನ್   

ಬೆಳಗಾವಿ: ಇಲ್ಲಿನ ಡಾ.ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ನಿಂದ ಕೊಡಮಾಡುವ 2021–22ನೇ ಸಾಲಿನ ವಿವಿಧ ‍ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ವಿಮರ್ಶೆ-ಸಂಶೋಧನೆ, ಜಾನಪದ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಲಾಗಿದೆ. ಡಾ.ಸಿ.ಎನ್. ರಾಮಚಂದ್ರನ್‌ (ವಿಮರ್ಶೆ–ಸಂಶೋಧನೆ), ಡಾ.ಎನ್.ಆರ್. ನಾಯ್ಕ್ (ಜಾನಪದ) ಮತ್ತು ಪದ್ಮರಾಜ ದಂಡಾವತಿ (ಡಾ.ಬೆಟಗೇರಿ ಕೃಷ್ಣಶರ್ಮ ಪತ್ರಕರ್ತ ಪ್ರಶಸ್ತಿ) ಅವರಿಗೆ ನೀಡಲು ಟ್ರಸ್ಟ್‌ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

ಪ್ರಶಸ್ತಿಯು ತಲಾ ₹ 50ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಪ್ರದಾನ ಸಮಾರಂಭವನ್ನು ಏಪ್ರಿಲ್‌ನಲ್ಲಿ ನಡೆಸಲಾಗುವುದು ಎಂದು ಟ್ರಸ್ಟ್‌ ಅಧ್ಯಕ್ಷ ಪ್ರೊ.ರಾಘವೇಂದ್ರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.