ADVERTISEMENT

‘ಭಾರತ ಹುಣ್ಣಿಮೆ’ ಜಾತ್ರೆ ರದ್ದು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 14:31 IST
Last Updated 22 ಫೆಬ್ರುವರಿ 2021, 14:31 IST

ಉಗರಗೋಳ (ಸವದತ್ತಿ ತಾ.): ‘ಕೋವಿಡ್ ಹರಡುವಿಕೆ ನಿಯಂತ್ರಣದ ದೃಷ್ಟಿಯಿಂದ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಮತ್ತು ಜೋಗುಳಬಾವಿ ಸತ್ಯೆಮ್ಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ, ಫೆ. 27ರಂದು ಯಲ್ಲಮ್ಮನಗುಡ್ಡದಲ್ಲಿ ನಡೆಯಬೇಕಿದ್ದ ‘ಭಾರತ ಹುಣ್ಣಿಮೆ’ ಜಾತ್ರೆ ರದ್ದುಪಡಿಸಲಾಗಿದೆ’ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.

‘ಭಕ್ತರು ಯಲ್ಲಮ್ಮನಗುಡ್ಡಕ್ಕೆ ಬಾರದೆ, ಮನೆಯಲ್ಲೇ ದೇವಿಯನ್ನು ಆರಾಧಿಸಬೇಕು. ಸಕಲ ಜೀವರಾಶಿಯ ಒಳಿತಿಗೆ ಪ್ರಾರ್ಥಿಸಬೇಕು. ಮುಂದಿನ ಆದೇಶದವರೆಗೂ ದೇವಸ್ಥಾನಕ್ಕೆ ಬಾರದೆ ಸಹಕರಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT