ಚಿಕ್ಕೋಡಿ: ತಾಲ್ಲೂಕಿನ ಮಜಲಟ್ಟಿ ಗ್ರಾಮದ ಬಳಿ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟರು. ಇಬ್ಬರು ಗಾಯಗೊಂಡಿದ್ದಾರೆ.
ಮೃತರನ್ನು ಚಿಕ್ಕೋಡಿ ತಾಲ್ಲೂಕಿನ ವಡರಾಳ ಗ್ರಾಮದ ಶಂಕರ್ ಘಾಟಗೆ (35). ಬೀರಪ್ಪ ಖೋತ (52) ಹಾಗೂ ಚಿಂಚಣಿ ಗ್ರಾಮದ ಪ್ರವೀಣ್ ಪಾಟೀಲ (32) ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ತಾಯಿ ಲಕ್ಷ್ಮೀ ಬಬಲೇಶ್ವರ ಮಗುವನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತಾಲ್ಲೂಕಿನ ವಡರಾಳ ಗ್ರಾಮದವರು.
ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.