ಗೋಕಾಕ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನಕ್ಕೆ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದರು.
ಇಲ್ಲಿನ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಗುರುವಾರ ಶ್ರದ್ಧಾಂಜಲಿ ಸಭೆ ನಡೆಯಿತು. ಫೋಟೊಗೆ ಪೂಜೆ ಸಲ್ಲಿಸಿ, ಮೌನಾಚರಣೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ತುಕಾರಾಮ ಕಾಗಲ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶಾಮಾನಂದ ಪೂಜಾರಿ, ಕಾರ್ಯದರ್ಶಿ ಬಸವರಾಜ ಹಿರೇಮಠ, ಅಲ್ಪಸಂಖ್ಯಾತರ ಘಟಕದ ಶಕೀಲ ಧಾರವಾಡಕರ, ಗ್ರಾಮೀಣ ಘಟಕ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮಹಿಳಾ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ಶಫಿ ಜಮಾದಾರ, ಮುಖಂಡರಾದ ಕಾಂತು ಎತ್ತಿನಮನಿ, ಅಶೋಕ ಗೋಣಿ, ಸುರೇಶ ಸನದಿ, ಶಶಿಧರ ದೇಮಶೆಟ್ಟಿ, ವಿರೂಪಾಕ್ಷ ಯಲಿಗಾರ, ಘಟಪ್ರಭಾದ ಸುರೇಶ ಪಾಟೀಲ, ಗನುಸಿಂಗ್ ರಜಪೂತ, ಸುಭಾಷ ಗಾಯಕವಾಡ, ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರಿಗೊಲ್ಲರ, ಜಯಾನಂದ ಹುಣಶ್ಯಾಳ, ಯಲ್ಲಪ್ಪ ಹಳ್ಳೂರ, ಜ್ಯೋತಿಭಾ ಸುಭಂಜಿ, ಅಬ್ದುಲವಹಾಬ ಜಮಾದಾರ, ಮಹಿಳಾ ಮೋರ್ಚಾದ ಕುಸುಮಾ ಖನಗಾಂವಿ, ರಾಜೇಶ್ವರಿ ಒಡೆಯರ, ಶಿವು ಹಿರೇಮಠ, ಕಿರಣ ಡಮಾಮಗರ, ಸಚಿನ ಕಮಟೇಕರ, ವಿಶಾಲ ಪಟಗುಂದಿ, ರಾಜು ಹಿರೇಅಂಬಿಗೇರ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.