ADVERTISEMENT

ಅಭ್ಯರ್ಥಿಗಳನ್ನೇ ಹೊರಗಿಟ್ಟು ಬಿಜೆಪಿ ಮುಖಂಡರ ಸಭೆ: ಕುತೂಹಲದ ಬೆಳವಣಿಗೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2019, 12:35 IST
Last Updated 19 ನವೆಂಬರ್ 2019, 12:35 IST
ಅಥಣಿಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನೆಯಲ್ಲಿ ಬಿಜೆಪಿ ಮುಖಂಡರು ಮಂಗಳವಾರ ಸಭೆ ನಡೆಸಿದರು
ಅಥಣಿಯಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಮನೆಯಲ್ಲಿ ಬಿಜೆಪಿ ಮುಖಂಡರು ಮಂಗಳವಾರ ಸಭೆ ನಡೆಸಿದರು   

ಬೆಳಗಾವಿ: ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಮಹೇಶ ಕುಮಠಳ್ಳಿ ಮತ್ತು ಶ್ರೀಮಂತ ಪಾಟೀಲ ಅವರು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೋಮವಾರ ಬಂದಿದ್ದ ಪಕ್ಷದ ಮುಖಂಡರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮನೆಯಲ್ಲಿ ನಡೆದಿರುವ ಸಭೆಯಲ್ಲಿ ಅಭ್ಯರ್ಥಿಗಳೇ ಇರಲಿಲ್ಲ. ಸಚಿವರಾದ ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಸಿ.ಸಿ. ಪಾಟೀಲ, ವಿಧಾನಪರಿಷತ್‌ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ, ಶಾಸಕ ಮುರುಗೇಶ ನಿರಾಣಿ ಮೊದಲಾದವರು ಪಾಲ್ಗೊಂಡು ಚರ್ಚಿಸಿದ್ದಾರೆ.

ಸಭೆಯ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿವೆ.

ADVERTISEMENT

ನಾಯಕರು ತಮ್ಮನ್ನು ಬಿಟ್ಟು ಪ್ರತ್ಯೇಕವಾಗಿ ಸಭೆ ನಡೆಸಿದ್ದು ಅಧಿಕೃತ ಅಭ್ಯರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.