ADVERTISEMENT

ದಿಢೀರ್‌ ಲಾಕ್‌ಡೌನ್‌: ಅಭಯ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 13:31 IST
Last Updated 22 ಏಪ್ರಿಲ್ 2021, 13:31 IST
ಅಭಯ ಪಾಟೀಲ
ಅಭಯ ಪಾಟೀಲ   

ಬೆಳಗಾವಿ: ನಗರದಲ್ಲಿ ಅಧಿಕಾರಿಗಳು ಗುರುವಾರ ಭಾಗಶಃ ದಿಢೀರ್‌ ಲಾಕ್‌ಡೌನ್‌ ಜಾರಿ ಮಾಡಿರುವುದಕ್ಕೆ ಆಡಳಿತ ಪಕ್ಷ ಬಿಜೆಪಿ ಶಾಸಕ ಅಭಯ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸರ್ಕಾರವು ವ್ಯಾಪಾರ ಹಾಗೂ ವಹಿವಾಟುಗೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ದಿಢೀರನೆ ಜಾರಿಗೆ ತಂದಿರುವುದರಿಂದ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಅನಾನುಕೂಲ ಉಂಟಾಗುತ್ತಿದೆ. ಇದನ್ನು ಸಂಬಂಧಿಸಿದ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ಹೊಸ ಮಾರ್ಗಸೂಚಿ ಜಾರಿಗೆ ಮುನ್ನ ಜನರಿಗೆ ತಿಳಿಸಬೇಕು. ಅಧಿಕಾರಿಗಳು ಮನಸ್ಸಿಗೆ ಬಂದಂತೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಸರಿಯಲ್ಲ’ ಎಂದಿದ್ದಾರೆ.

‘ಕೊರೊನಾ ಬಗ್ಗೆ ಜನರಲ್ಲೂ ಜಾಗೃತಿ ಮೂಡಿದೆ. ಮುಂಚಿತವಾಗಿ ತಿಳಿಸಿ ಅನುಷ್ಠಾನಗೊಳಿಸಿದರೆ ಹೊಂದಿಕೊಳ್ಳುತ್ತಾರೆ. ಅಧಿಕಾರಿಗಳು ಮನಸ್ಸಿಗೆ ಬಂದಂತೆ ಮಾಡಬಾರದು’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.