ADVERTISEMENT

ಮುಖ್ಯಮಂತ್ರಿಯಾಗುತ್ತೇನೆಂದು ಒಬ್ಬ ಹುಚ್ಚನಂತೆ ಓಡಾಡ್ತಿದಾನೆ: ಬಸನಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2021, 7:07 IST
Last Updated 17 ಡಿಸೆಂಬರ್ 2021, 7:07 IST
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ   

ಬೆಳಗಾವಿ: 'ವ್ಯಕ್ತಿಯೊಬ್ಬ ಜನವರಿ 14ರ ನಂತರ ನಾನು ಮುಖ್ಯಮಂತ್ರಿ ಆಗುತ್ತೇನೆಂದು ಹೇಳಿಕೊಂಡು ಹುಚ್ಚನಂತೆ ಓಡಾಡುತ್ತಿದ್ದಾನೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ಅವರನ್ನು ಟೀಕಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಆತ‌, ರಾಜ್ಯದ ಮಹಾನ್ ನಾಯಕರನ್ನು ಎಲ್ಲ ರೀತಿಯಲ್ಲೂ ಸಂತೃಪ್ತಿಪಡಿಸಿದ್ದೇನೆ. ಅವರಿಗೆ ಸಕಲ ಐಶ್ವರ್ಯ- ಬೋಗಗಳನ್ನು ದಯಪಾಲಿಸಿದ್ದೇನೆ. ಹೀಗಾಗಿ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಕೊಂಡಿದ್ದಾರೆ' ಎಂದು ಆರೋಪಿಸಿದರು.

ಜನವರಿ ನಂತರ ರಾಜಕೀಯ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗೆ, 'ನಮ್ಮ ಪ್ರಧಾನಿ ಬಹಳ ಗಟ್ಟಿಯಾಗಿದ್ದಾರೆ. ಯಾವುದೇ ಆಸೆ- ಆಮಿಷಗಳಿಗೆ ಒಳಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಆಗುತ್ತೇನೆಂದು ಹೇಳಿಕೊಂಡು ಓಡಾಡುವವರ ಬಾಯಿಗೆ ಬೀಗ ಹಾಕಬೇಕು. ಅಂಥವರು ಮುಖ್ಯಮಂತ್ರಿಯಾದರೆ ದೊಡ್ಡ ಅನಾಹುತ ಆಗುತ್ತದೆ ಎಂದು ಈಚೆಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಚ್ಚರಿಕೆ ಕೊಟ್ಟಿದ್ದೇನೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.