ಬೆಳಗಾವಿ: ಬಿಜೆಪಿಯಿಂದ ಡಿ. 5ರಂದು ನಗರದಲ್ಲಿ ಹಮ್ಮಿಕೊಂಡಿರುವ ರಾಜ್ಯ ಕಾರ್ಯಕಾರಿಣಿಗೆ ನಾಯಕರು ಪೂರ್ವ ಸಿದ್ಧತೆ ಆರಂಭಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಮುಖಂಡರಾದ ರಾಜು ಚಿಕ್ಕನಗೌಡರ, ಕಿರಣ ಜಾಧವ್ ಪಾಲ್ಗೊಂಡಿದ್ದರು.
ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮೊದಲಾದ ಗಣ್ಯರು ಭಾಗವಹಿಸುವುದರಿಂದ ಆತಿಥ್ಯದಲ್ಲಿ ಕುಂದುಂಟಾಗದಂತೆ ನೋಡಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳಬೇಕು ಎಂದು ನಿರ್ಧರಿಸಲಾಯಿತು.
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿಯ ಕಾರ್ಯಕಾರಿಣಿ ಮಹತ್ವ ಪಡೆದುಕೊಂಡಿದೆ. ಆದರೆ, ಯಾವ ಸ್ಥಳದಲ್ಲಿ ನಡೆಸಬೇಕು ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಮತ್ತೊಂದು ಸುತ್ತಿನ ಸಭೆಯಲ್ಲಿ ಜಾಗ ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 2017ರಲ್ಲಿ ಧರ್ಮನಾಥ ಭವನದಲ್ಲಿ ಕಾರ್ಯಕಾರಿಣಿ ನಡೆಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.