ADVERTISEMENT

ಬೆಳಗಾವಿ: ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಸಾವು

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 7:38 IST
Last Updated 15 ನವೆಂಬರ್ 2025, 7:38 IST
   

ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟಿವೆ.

ಗುರುವಾರ 8 ಕೃಷ್ಣಮೃಗ ಮೃತಪಟ್ಟಿದ್ದವು‌. ಶನಿವಾರ 20 ಪ್ರಾಣಿಗಳು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

'ನಮ್ಮಲ್ಲಿ 38 ಕೃಷ್ಣಮೃಗ ಇದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇದ್ದು, ತನಿಖೆ ಮಾಡುತ್ತಿದ್ದೇವೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.

'ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ' ಎಂದು ಈಶ್ವರ ಖಂಡ್ರೆ 'ಪ್ರಜಾವಾಣಿ'ಗೆ ತಿಳಿಸಿದರು‌.