ಬೆಳಗಾವಿ: ತಾಲ್ಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಭಾನುವಾರಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಉಡುಪಿಯ ವಾಹೀಲ್ ದಾದಾಪೀರ್ ದೇಸಾಯಿ (10) ಮೃತಪಟ್ಟ ಬಾಲಕ. ದಸರಾ ಹಬ್ಬಕ್ಕಾಗಿ ಬಾಲಕ ತನ್ನ ತಾಯಿಯ ತವರೂರಾದ ಕೆ.ಕೆ.ಕೊಪ್ಪ ಗ್ರಾಮಕ್ಕೆ ಬಂದಿದ್ದ. ಗೆಳೆಯರೊಂದಿಗೆ ಊರ ಹೊರಗಿನ ಹೊಂಡಕ್ಕೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.