ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ | ಹಲವು ಮಾರ್ಗದಲ್ಲಿ ಬಸ್ ಸಂಚಾರ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:11 IST
Last Updated 7 ಆಗಸ್ಟ್ 2019, 14:11 IST
   

ಬೆಳಗಾವಿ: ಜಿಲ್ಲೆಯಾದ್ಯಂತ ಹಾಗೂ ನೆರೆಯ ಮಹಾರಾಷ್ಟ್ರ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿ ರಸ್ತೆಗಳು ಕುಸಿದಿರುವುದರಿಂದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆಲವು ಮಾರ್ಗಗಳಲ್ಲಿ ಬಸ್‌ಗಳ ಕಾರ್ಯಾಚರಣೆ ಸ್ಥಗಿತಗೊಳಿಸಿದೆ.

ಖಾನಾಪುರ ತಾಲ್ಲೂಕು, ಗೋವಾ, ಕೊಲ್ಹಾಪುರ, ವಿಜಯಪುರ, ಗೋಕಾಕ, ಹಿಡಕಲ್, ಪಾಶ್ಚಾಪುರ, ಧಾರವಾಡ, ಹುಬ್ಬಳ್ಳಿ ಹಾಗೂ ಬೆಳಗಾವಿ ಉಪನಗರ ವ್ಯಾಪ್ತಿಯಲ್ಲಿ ಬಸ್‌ಗಳು ಸಂಚರಿಸುತ್ತಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಹಾಗೂ ರಸ್ತೆ ಸಂಪರ್ಕ ಹೊಂದಿರುವ ಮಾರ್ಗಗಳಲ್ಲಿ ಕಾರ್ಯಾಚರಣೆಗೆ ಕ್ರಮ ವಹಿಸಲಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ನೆರೆ ಹಾವಳಿ ಭೀತಿ ಕಡಿಮೆ ಆಗುವವರೆಗೆ ಸಹಕರಿಸಬೇಕು’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲಿ ಮೊ: 7760991612, 7760991613, 7760991642, 7760991635 ಸಂಪರ್ಕಿಸಬಹುದು ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.