ADVERTISEMENT

ಯರಗಟ್ಟಿ | ಕಾರು- ಬೈಕ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2024, 16:32 IST
Last Updated 12 ಜುಲೈ 2024, 16:32 IST

ಯರಗಟ್ಟಿ: ಯರಗಟ್ಟಿ–ಮುನವಳ್ಳಿ ರಸ್ತೆಯಲ್ಲಿನ ರೈನಾಪೂರ ಗ್ರಾಮದ ಜೂಗನವರ ತೋಟದ ಹತ್ತಿರ ಗುರವಾರ ಮಧ್ಯರಾತ್ರಿ ಕಾರು–ಬೈಕ್ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಗೋಕಾಕ ತಾಲ್ಲೂಕಿನ ಶಿಲ್ತಿಭಾವಿ ನಿವಾಸಿಗಳಾದ ಪ್ರದೀಪ್ ಹಣಮಂತಪ್ಪ ಕುರಟ್ಟಿ(17), ಮಾರುತಿ ಸೋಮಪ್ಪ ಖರ್ಚನ್ನವರ (17) ಮೃತರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇವರನ್ನು  ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುರೋಡ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT