ADVERTISEMENT

ಹೋಟೆಲ್ ಮಾಲೀಕನ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 14:47 IST
Last Updated 16 ಜೂನ್ 2021, 14:47 IST

ಬೆಳಗಾವಿ: ಇಲ್ಲಿನ ಹೊಸೂರು ಬಸವನಗಲ್ಲಿಯ ಹೋಟೆಲ್ ‘ಮಲ್ಹಾರ’ದಲ್ಲಿ ಬುಧವಾರ ಕೋವಿಡ್ ಲಾಕ್‌ಡೌನ್‌ ನಡುವೆಯೂ ಊಟ ನೀಡುತ್ತಿದ್ದ ಆರೋಪದ ಮೇಲೆ ಮಾಲೀಕ ಶ್ರೀಧರ ಪಾಟೀಲ ಹಾಗೂ ಇತರ 17 ಮಂದಿ ವಿರುದ್ಧ ಶಹಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ 2020ರ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ತಿಳಿಸಿದ್ದಾರೆ.

ಅನವಶ್ಯವಾಗಿ ಸಂಚರಿಸುತ್ತಿದ್ದವರಿಂದ 26 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮಾಸ್ಕ್‌ ಧರಿಸದೆ ಓಡಾಡುತ್ತಿದ್ದ 163 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.