ADVERTISEMENT

ಸೆ. 14 ‘ಕನ್ನಡ ಭಾಷಾ ದಿನ’ವೆಂದು ಆಚರಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 11:59 IST
Last Updated 14 ಸೆಪ್ಟೆಂಬರ್ 2020, 11:59 IST
ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸುವಂತೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಬೆಳಗಾವಿಯ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು
ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸುವಂತೆ ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಬೆಳಗಾವಿಯ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಸೆ. 14ರಂದು ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಕನ್ನಡ ದಿನ ಆಚರಿಸುವಂತೆ ಕಚೇರಿ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಿದರು. ಅಂಚೆ ಇಲಾಖೆ ಅಧಿಕಾರಿಗಳಿಗೆ ಸಿಹಿ ವಿತರಿಸಿದರು.

‘ರಾಷ್ಟ್ರೀಕೃತ ಬ್ಯಾಂಕ್‌, ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕು. ಈ ರಾಜ್ಯದ ಸವಲತ್ತುಗಳನ್ನು ಪಡೆದು ಅನ್ಯ ಭಾಷೆಗಳ ಬಳಕೆಗೆ ಉತ್ತೇಜನ ನೀಡಬಾರದು. ಈ ಎಲ್ಲ ಕಚೇರಿಗಳಲ್ಲೂ ಕನ್ನಡ ಭಾಷಾ ದಿನವನ್ನು ಆಚರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಸಂಗೋಡಿ, ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಾ ಯಾದವಾಡ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.