ADVERTISEMENT

ಕೇಂದ್ರದಿಂದ ಶೀಘ್ರವೇ ಪರಿಹಾರ: ಕಟೀಲ್

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2019, 6:04 IST
Last Updated 2 ಅಕ್ಟೋಬರ್ 2019, 6:04 IST

ಬೆಳಗಾವಿ: ‘ಕೇಂದ್ರ ಸರ್ಕಾರದಿಂದ ಮೂರ್ನಾಲ್ಕು ದಿನಗಳಲ್ಲಿ ನೆರೆ ಪರಿಹಾರ ಬಿಡುಗಡೆಯಾಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರದ ಅಧಿಕಾರಿಗಳ ತಂಡವೂ ಬಂದು ಹೋಗಿದೆ. ರಾಜ್ಯ ಸರ್ಕಾರವೂ ವರದಿ ಸಲ್ಲಿಸಿದೆ. ಅನುದಾನ ಬಿಡುಗಡೆ ವಿಷಯವನ್ನು ಪ್ರಧಾನಿ ಹಾಗೂ ಗೃಹ ಸಚಿವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ’ ಎಂದರು.

‘ಕೇರಳದಲ್ಲಿ ಪ್ರವಾಹ ಬಂದು ಹಲವು ತಿಂಗಳುಗಳಾಗಿವೆ. 16 ರಾಜ್ಯಗಳ ವರದಿ ಕೇಂದ್ರಕ್ಕೆ ಸಲ್ಲಿಕೆಯಾಗಿದೆ. ಮೊದಲು ವರದಿ ಕೊಟ್ಟವರಿಗೆ ಹಣ ಬಿಡುಗಡೆ ಆಗಲಿದೆ. ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೊಡಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಬೆಳಗಾವಿಯಲ್ಲಿ ಗಾಂಧಿ ಜಯಂತಿಯನ್ನು ವಿಭಿನ್ನವಾಗಿ ಆಚರಿಸುತ್ತೇವೆ’ ಎಂದರು.

ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ನಗರಕ್ಕೆ ಬಂದ ಅವರನ್ನು ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಸಂಭ್ರಮದಿಂದ ಬರಮಾಡಿಕೊಂಡರು. ಚಿಕ್ಕೋಡಿಯಲ್ಲಿ ಅ.2ರಂದು ಕಾರ್ಯಕರ್ತರ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.