ADVERTISEMENT

ಯಾರೊಂದಿಗೂ‌ ಮೈತ್ರಿ ಮಾಡಿಕೊಳ್ಳದಿರುವುದು ಜೆಡಿಎಸ್‌ ಪಕ್ಷದ ಆಂತರಿಕ: ಬೊಮ್ಮಾಯಿ

ವಿಧಾನಪರಿಷತ್ ಚುನಾವಣೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2021, 12:24 IST
Last Updated 7 ಡಿಸೆಂಬರ್ 2021, 12:24 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಯಾರೊಂದಿಗೂ‌ ಮೈತ್ರಿ ಮಾಡಿಕೊಳ್ಳದಿರುವುದು ಜೆಡಿಎಸ್‌ ಪಕ್ಷದ ಆಂತರಿಕ ವಿಚಾರ ಹಾಗೂ ಅವರ ನಿರ್ಧಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಂಗಳವಾರ ಮಾತನಾಡಿದ ಅವರು, ಜೆಡಿಎಸ್ ಬೆಂಬಲವನ್ನು ನಾನೇನೂ ಕೇಳಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲೆಲ್ಲಿ ಅಭ್ಯರ್ಥಿಗಳನ್ನು ಹಾಕಿಲ್ಲವೋ ಅಲ್ಲಿ ಬೆಂಬಲ ಕೊಡುವಂತೆ ನಮ್ಮ ನಾಯಕ ಬಿ.ಎಸ್. ಯಡಿಯೂರಪ್ಪ ಜೆಡಿಎಸ್ ನಾಯಕರನ್ನು‌ ಕೇಳಿದ್ದರಷ್ಟೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.