ADVERTISEMENT

ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ರಸ್ತೆ ಅಪಘಾತ: ಚಿಕ್ಕೋಡಿಯ ಯೋಧ ಸೂರ‌ಜ್‌ ಸಾವು

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 15:59 IST
Last Updated 19 ಜುಲೈ 2022, 15:59 IST
ಸೂರ‌ಜ್‌ ಧೋಂಡಿರಾಮ ಸುತಾರ
ಸೂರ‌ಜ್‌ ಧೋಂಡಿರಾಮ ಸುತಾರ   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪಶ್ಚಿಮ ಬಂಗಾಳದ ಪಂಜಿಪಾಡಾದಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಯೋಧ, ಚಿಕ್ಕೋಡಿ ತಾಲ್ಲೂಕಿನ ಯಡೂರವಾಡಿಯ ಸೂರ‌ಜ್‌ ಧೋಂಡಿರಾಮ ಸುತಾರ (30) ಮೃತಪಟ್ಟಿದ್ದಾರೆ.

ಈ ಯೋಧ ಪತ್ನಿ ಸಮೇತರಾಗಿ ಆಟೊದಲ್ಲಿ ಕೆಲಸದ ಸ್ಥಳಕ್ಕೆ ಹೋಗುತ್ತಿದ್ದರು. ಆಟೊದಿಂದ ಇಳಿಯುವ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು. ಅದರ ಚಕ್ರಕ್ಕೆ ಸಿಲುಕಿ ಯೋಧ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

2012ರಲ್ಲಿ ಅವರು ಬಿಎಸ್‌ಎಫ್‌ಗೆ ಸೇರಿದ್ದರು. ಅವರ ಸಾವಿನ ಸುದ್ದಿ ಮಂಗಳವಾರ ತಿಳಿದಿದ್ದರಿಂದ ಯಡೂರವಾಡಿಯಲ್ಲಿ ನೀರವ ಮೌನ ಆವರಿಸಿತು.

ADVERTISEMENT

ಸೂರಜ್‌ ಅವರಿಗೆ ತಂದೆ, ಪತ್ನಿ, ಪುತ್ರಿ ಇದ್ದಾರೆ. ದೆಹಲಿ ಮೂಲಕ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬುಧವಾರ (ಜುಲೈ 20) ಬೆಳಿಗ್ಗೆ ಪಾರ್ಥಿವ ಶರೀರ ತರಲಾಗುವುದು. ನಂತರ ಯಡೂರವಾಡಿಯಲ್ಲಿ ಸಕಲ ಸರ್ಕಾರಿ ಗೌರವದಂತೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.