ಬೆಳಗಾವಿ: ಇಲ್ಲಿನ ಸಾವಗಾಂವ ರಸ್ತೆಯಲ್ಲಿರುವ ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ಆವರಣದಲ್ಲಿ ಸ್ಥಾಪಿಸಿರುವ ದಿವಂಗತ ಸುರೇಶ ಅಂಗಡಿ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಅನಾವರಣಗೊಳಿಸಿದರು.
ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಸಂಸದೆ ಮಂಗಲಾ ಅಂಗಡಿ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹಣಮಂತ ನಿರಾಣಿ, ಶಾಸಕ ಜಗದೀಶ ಶೆಟ್ಟರ್, ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕಾಂಗ್ರೆಸ್ ಮುಖಂಡ ಪ್ರಕಾಶ ಹುಕ್ಕೇರಿ, ವಿವಿಧ ಮಠಗಳ ಪೀಠಾಧಿಪತಿಗಳು, ಅಂಗಡಿ ಕುಟುಮಬದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.