ADVERTISEMENT

ಅಧಿವೇಶನದಲ್ಲಿ ಪ್ರತಿಭಟನೆ ಸಹಜ: ಸಿಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 12:03 IST
Last Updated 12 ಡಿಸೆಂಬರ್ 2021, 12:03 IST
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ   

ಬೆಳಗಾವಿ: ‘ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಪ್ರತಿಭಟನೆಗಳು ಸಹಜ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರೆಳುವ ಮಾರ್ಗ ಮಧ್ಯದಲ್ಲಿ ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಅವರು ಮಾತನಾಡಿದರು.

‘ಪ್ರತಿ ಅಧಿವೇಶನದ ವೇಳೆ ಹಲವು ಸಮಸ್ಯೆಗಳನ್ನು ತೆಗೆದುಕೊಂಡು ಜ‌ನರು ಬರುತ್ತಾರೆ. ಕೆಲವರು ಧರಣಿ ಮಾಡುತ್ತಾರೆ. ಎಲ್ಲರನ್ನೂ ಭೇಟಿಯಾಗಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದರು.

ADVERTISEMENT

‘ಅಧಿವೇಶನದಲ್ಲಿ ಯಾವುದೇ ವಿಷಯ ಚರ್ಚೆಯಾದರೂ ಪರಿಹಾರದ ರೂಪದಲ್ಲಿ ಏನೆಲ್ಲಾ ಮಾಡಬಹುದೋ ಅದಕ್ಕೆ ನಮ್ಮ ಸರ್ಕಾರ ಸ್ಪಂದಿಸುತ್ತದೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.