ADVERTISEMENT

ಬೆಳಗಾವಿ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2020, 18:09 IST
Last Updated 14 ಅಕ್ಟೋಬರ್ 2020, 18:09 IST
ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸುವಂತೆ ಆಗ್ರಹಿಸಿ ರಾಜ್ಯ ಕಾಲೇಜು ಶಿಕ್ಷಕ ಸಂಘದ ಆರ್‌ಸಿಯು ಘಟಕ ಕಾರ್ಯದರ್ಶಿ ಡಾ.ಬಿ.ಎಂ. ಬಡಿಗೇರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು
ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸುವಂತೆ ಆಗ್ರಹಿಸಿ ರಾಜ್ಯ ಕಾಲೇಜು ಶಿಕ್ಷಕ ಸಂಘದ ಆರ್‌ಸಿಯು ಘಟಕ ಕಾರ್ಯದರ್ಶಿ ಡಾ.ಬಿ.ಎಂ. ಬಡಿಗೇರ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು   

ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯ (ಆರ್‌ಸಿಯು)ದ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜು ಮತ್ತು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ಕಾಲೇಜು ಶಿಕ್ಷಕ ಸಂಘ ಆರ್‌ಸಿಯು ಘಟಕದ ಪದಾಧಿಕಾರಿಗಳು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಆರ್‌ಸಿಯು ಕ್ಯಾಂಪಸ್, ವಿಜಯಪುರ, ಬಾಗಲಕೋಟೆ, ಜಮಖಂಡಿ ಸ್ನಾತಕೋತ್ತರ ಕೇಂದ್ರಗಳು ಹಾಗೂ ಸಂಗೊಳ್ಳಿ ರಾಯಣ್ಣ ಘಟಕ ಕಾಲೇಜಿನಲ್ಲಿ 80 ಮಂದಿ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದೇವೆ. ಯುಜಿಸಿ ನಿಯಮಾವಳಿ ಪ್ರಕಾರ ನಮಗೆ ಗೌರವಧನ ಹೆಚ್ಚಿಸಬೇಕು. ಕಳೆದ ವರ್ಷದಲ್ಲಿ ಪರೀಕ್ಷೆ ಮೊದಲಾದ ಕಾರ್ಯಗಳನ್ನು ನಿರ್ವಹಿಸಿದ ಬಾಕಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು’ ಎಂದು ಕೋರಿದರು.

‘ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಜೂನ್, ಜುಲೈ ಮತ್ತು ಆಗಸ್ಟ್ ಅವಧಿಯನ್ನು ಕೋವಿಡ್ ಸೇವೆ ಎಂದು ಪರಿಗಣಿಸಿ ವೇತನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿವೇಶನದಲ್ಲಿ ತಿಳಿಸಿದ್ದಾರೆ. ಅದಕ್ಕೆ ನಮ್ಮನ್ನೂ ಪರಿಗಣಿಸಬೇಕು. ಹಿಂದಿನ ವರ್ಷ ಕಾರ್ಯನಿರ್ವಹಿಸಿದ ಅತಿಥಿ ಉಪನ್ಯಾಸಕರನ್ನು ಈ ವರ್ಷವೂ ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಘಟಕದ ಕಾರ್ಯದರ್ಶಿ ಬಿ.ಎಂ. ಬಡಿಗೇರ, ಡಾ.ಎಸ್.ಬಿ. ರಾಯನಗೌಡರ, ಮಹಾದೇವ ಧರಿಗೌಡರ ಮತ್ತು ಸಚಿನ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.