ಬೆಳಗಾವಿ: ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ನಿರೀಕ್ಷಿಸಿದಷ್ಟು ಫಲಿತಾಂಶ ಪಡೆಯದಿರಲು ಕಾರಣಗಳನ್ನು ತಿಳಿದುಕೊಳ್ಳುವ ಉದ್ದೇಶದಿಂದ ಕೆಪಿಸಿಸಿಯಿಂದ ರಚಿಸಲಾಗಿರುವ ಸತ್ಯಶೋಧನಾ ಸಮಿತಿಯವರು ಜುಲೈ 24ರಂದು ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಇಲ್ಲಿನ ಆರ್ಟಿಒ ಸಮೀಪದ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಸಮಿತಿಯ ಬಸವರಾಜ ರಾಯರೆಡ್ಡಿ, ವಿ.ಆರ್. ಸುದರ್ಶನ್, ವೀರಕುಮಾರ ಪಾಟೀಲ, ನಸೀರ್ ಅಹಮದ್, ವೀರಣ್ಣ ಮತ್ತಿಕಟ್ಟಿ, ಆರ್. ಧ್ರುವನಾರಾಯಣ ಭಾಗವಹಿಸಲಿದ್ದಾರೆ. ಶಾಸಕರು, ವಿಧಾನಪರಿಷತ್ ಸದಸ್ಯರು, ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಪುರಸಭೆ ಸದಸ್ಯರು ಭಾಗವಹಿಸಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.