ಬೆಳಗಾವಿ: 'ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ಶಾಸಕರು ಆಯ್ಕೆ ಮಾಡಿದ್ದರು. ಹೈಕಮಾಂಡ್ ಒಪ್ಪಿತ್ತು. ಐದು ವರ್ಷ ಯಾರಿಗೂ ಹಣ ಕೊಡದೆ ಮುಖ್ಯಮಂತ್ರಿ ಸ್ಥಾನವನ್ನು ನಿರ್ವಹಿಸಿದೆ' ಎಂದು ಪ್ರತಿಕ್ರಿಯಿಸಿದರು.
ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, 'ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು, ನಿಮ್ಮನ್ನು ಮುಖ್ಯಮಂತ್ರಿ ಮಾಡ್ತೀವಿ ₹ 2,500 ಕೋಟಿ ಸಿದ್ಧವಿಟ್ಟುಕೊಳ್ಳಿ ಎಂದಿದ್ದರು' ಎಂಬುದಾಗಿ ಹೇಳಿದ್ದರು. ಈ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಇವನ್ನೂ ಓದಿ
*ಮುಖ್ಯಮಂತ್ರಿ ಮಾಡ್ತೀವಿ ಎಂದು ₹2,500 ಕೋಟಿ ಕೇಳಿದ್ದರು: ಬಸನಗೌಡ ಪಾಟೀಲ ಯತ್ನಾಳ
*ಯತ್ನಾಳ್ ಬಳಿ ₹2,500 ಕೋಟಿ ಕೇಳಿದ್ಯಾರು, ಕಳುಹಿಸಿದ್ಯಾರು? –ಸಿದ್ದರಾಮಯ್ಯ
*ಪ್ರಧಾನಿಯೇ ಸುಳ್ಳು ಹೇಳುತ್ತಾರೆ ಎಂದರೆ ಏನನ್ನಬೇಕು: ಸಿದ್ದರಾಮಯ್ಯ ವಾಗ್ದಾಳಿ
*ಸಿಎಂ ಸ್ಥಾನಕ್ಕೆ ₹2,500 ಕೋಟಿ ಎಂದಿರುವ ಯತ್ನಾಳ್ ಮಾನಸಿಕ ಅಸ್ವಸ್ಥರಲ್ಲ: ಡಿಕೆಶಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.