ADVERTISEMENT

ಬೆಳಗಾವಿ | ಬಿಜೆಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜು: ಗಜಾನನ ಮಂಗಸೂಳಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 13:36 IST
Last Updated 1 ಜುಲೈ 2020, 13:36 IST
ತೆಲಸಂಗದಲ್ಲಿ ಬುಧವಾರ ಕೆಪಿಸಿಸಿ ಪದಾಧಿಕಾರಿಗಳ ಪದಗ್ರಹಣ ಅಂಗವಾಗಿ ಪಕ್ಷದವರು ಜಾಗೃತಿ ಕಾರ್ಯಕ್ರಮ ನಡೆಸಿದರು
ತೆಲಸಂಗದಲ್ಲಿ ಬುಧವಾರ ಕೆಪಿಸಿಸಿ ಪದಾಧಿಕಾರಿಗಳ ಪದಗ್ರಹಣ ಅಂಗವಾಗಿ ಪಕ್ಷದವರು ಜಾಗೃತಿ ಕಾರ್ಯಕ್ರಮ ನಡೆಸಿದರು   

ತೆಲಸಂಗ: ‘ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರ ಪದಗ್ರಹಣದ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವೈಫಲ್ಯದ ವಿರುದ್ಧ ಹೋರಾಟಕ್ಕೆ ಸನ್ನದ್ಧರಾಗಬೇಕು. ಜನ ವಿರೋಧಿ ನೀತಿ ಖಂಡಿಸಿ ನೊಂದವರಿಗೆ ನ್ಯಾಯ ದೊರಕಿಸಿಕೊಡಲು ಕಾರ್ಯಕರ್ತರು ಈ ಕಾರ್ಯಕ್ರಮದ ಮೂಲಕ ಹೊಸ ಚೈತನ್ಯದೊಂದಿಗೆ ಮುನ್ನಡೆಯಬೇಕು’ ಎಂದು ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು.

ಜುಲೈ 2ರಂದು ನಡೆಯಲಿರುವ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಗ್ರಾಮದಲ್ಲಿ ನಡೆದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಈ ಸರ್ಕಾರಗಳು ಎಲ್ಲ ರೀತಿಯಲ್ಲೂ ವಿಫಲವಾಗಿವೆ. ಬಡವರು, ರೈತರು, ವ್ಯಾಪಾರಿಗಳು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದರೂ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ. ಸುಳ್ಳು ಭರವಸೆಯೊಂದಿಗೆ ಜನರಿಗೆ ಮೋಸ ಮಾಡುತ್ತಿದೆ. ಇದರ ವಿರುದ್ಧ ಕಾರ್ಯಕರ್ತರು ಹೋರಾಡಬೇಕು’ ಎಂದರು.

ADVERTISEMENT

ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಮುಖಂಡರಾದ ಅಧ್ಯಕ್ಷ ಕಾಶೀನಾಥ ಕುಂಬಾರಕರ, ಶಿವಾನಂದ ಗುಡ್ಡಾಪೂರ, ಈಶ್ವರ ಉಂಡೋಡಿ, ಸುರೇಶ ಖೊಳಂಬಿ, ಸಿದ್ದು ಕೊಕಟನೂರ, ಧರೆಪ್ಪ ಮಾಳಿ, ರವಿ ಕವಟಗಿ, ಸುರೇಶ ಹುಜರೆ, ಅಪ್ಪು ಜಮಾದರ, ಆಕಾಶ ಬಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.