ಬೈಲಹೊಂಗಲ: ತಾಲ್ಲೂಕಿನ ನೇಸರಗಿ ಹಾಗೂ ಕಿತ್ತೂರು ತಾಲ್ಲೂಕಿನ ಕಿತ್ತೂರು ರೈತ ಸಂಪರ್ಕ ಕೇಂದ್ರಗಳಲ್ಲಿ 2024-25ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿ ಹೊಂಡಕ್ಕೆ ಕ್ಷೇತ್ರ ಬದು ನಿರ್ಮಾಣ, ತಂತಿ ಬೇಲಿ, ಡಿಸೈಲ್ ಇಂಜಿನ್, ತಾಡಪಾಲ್, ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಸೌಲಭ್ಯವಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ 90ರಷ್ಟು, ಸಾಮಾನ್ಯ ರೈತರಿಗೆ ಶೇ 80ರಷ್ಟು ಸಹಾಯಧನವಿದೆ. ಆಸಕ್ತರು ರೈತ ಸಂಪರ್ಕ ಕೇಂದ್ರಗಳಲ್ಲಿ ಸೆ.30ರೊಳಗಾಗಿ ಅರ್ಜಿ ಸಲ್ಲಿಸಬಹುದು/ ಈ ಹಿಂದಿನ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.