ಸಂಕೇಶ್ವರ: ಮಳೆಗಾಲದ ಪ್ರಾರಂಭದ ದಿನಗಳಲ್ಲಿಯೆ ಕಳೆದ 5 ದಿನಗಳಿಂದ ಸಂಕೇಶ್ವರ ಪಟ್ಟಣಕ್ಕೆ ಕಲುಷಿತ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಜನರು ದೂರಿದ್ದಾರೆ.
ಹಿಡಕಲ್ ಜಲಾಶಯದಿಂದ ಸಂಕೇಶ್ವರ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ.
ಸಂಕೇಶ್ವರ ಪುರಸಭೆಯ ಮುಖ್ಯಾಧಿಕಾರಿ ಜಗದೀಶ ಈಟಿ ಮಾತನಾಡಿ, ಮಳೆಗಾಲ ಆರಂಭವಾಗಿರು ಕಾರಣ ಹಿಡಕಲ್ ಜಲಾಶಯಕ್ಕೆ ಹೊಸ, ಕಲುಷಿತ ನೀರು ಹರಿದು ಬರುತ್ತಿದೆ. ಅದನ್ನು ಶುದ್ಧೀಕರಿಸುವ ಕಾರ್ಯ ನಡೆಯುತ್ತಿದೆ. ಶನಿವಾರದಿಂದ ಶುದ್ಧ ನೀರು ಪೂರೈಕೆಯಾಗುತ್ತದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.