ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಲ್ಲಿ, ಮಹಾರಾಷ್ಟ್ರದ ಕಿಡಿಗೇಡಿಗಳು ಮರಾಠಿಯಲ್ಲಿ ಬರೆದಿರುವ ಪೋಸ್ಟರ್ ಅಂಟಿಸಿರುವುದು ಶುಕ್ರವಾರ ಬೆಳಕಿಗೆ ಬಂದಿದೆ.
‘ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿ ಸಂಯುಕ್ತ ಮಹಾರಾಷ್ಟ್ರ ಆಗುವುದು’ ಎಂಬ ಪೋಸ್ಟರ್ ಅನ್ನು ಬೆಳಗಾವಿ–ಪುಣೆ ಮಾರ್ಗದಲ್ಲಿ ಸಂಚರಿಸುವ ಬಸ್ ಮೇಲೆ ಅಂಟಿಸಿದ್ದಾರೆ. ‘ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ, ಪುಣೆ’ ಹೆಸರು ಆ ಪೋಸ್ಟರ್ ಮೇಲಿದೆ. ಇನ್ನೂ ಕೆಲವು ಬಸ್ಗಳ ಮೇಲೆ ಈ ರೀತಿಯ ಪೋಸ್ಟರ್ ಹಾಕಲಾಗಿದೆ ಎನ್ನಲಾಗುತ್ತಿದೆ.ಪೋಸ್ಟರ್ನಫೋಟೊಗಳುಸಾಮಾಜಿಕಮಾಧ್ಯಮದಲ್ಲಿಹರಿದಾಡುತ್ತಿವೆ.
‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ’ ಎಂದು ಆ ರಾಜ್ಯದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಚೆಗೆ ಹೇಳಿಕೆ ನೀಡಿದ್ದರು. ಗಡಿ ವಿವಾದದ ಕುರಿತು ಪುಸ್ತಕವನ್ನು ಬಿಡುಗಡೆ ಮಾಡಿದ್ದರು. ಮರಾಠಿ ಭಾಷಿಗರಿರುವ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿದ್ದರು. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದಿದ್ದರು. ಗಡಿ ವಿವಾದಕ್ಕೆ ಸಂಬಂಧಿಸಿದ 50 ವರ್ಷದ ಸಾಕ್ಷ್ಯಚಿತ್ರವನ್ನು ಗುರುವಾರವಷ್ಟೇ ಬಿಡುಗಡೆ ಮಾಡಿದ್ದರು. ಇದರಿಂದ ಎರಡೂ ರಾಜ್ಯಗಳ ಗಡಿಯಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ ಎನ್ನುವುದು ಕನ್ನಡ ಹೋರಾಟಗಾರರ ದೂರಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.