ಬೆಳಗಾವಿ: ‘ನಗರದ ವ್ಯಕ್ತಿಗೆ ಕೊರೊನಾ ವೈರಾಣು ಸೋಂಕು ತಗುಲಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಫೋಟೊ ಮತ್ತು ಹೆಸರನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ವದಂತಿ ಹರಡಿಸಿ ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದ್ದ ಆರೋಪದ ಮೇಲೆ ಯುವಕನನ್ನು ಇಲ್ಲಿನ ಮಾಳಮಾರುತಿ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಮೇಘನ್ ಅಶೋಕ ಕಣಬರಕರ ಬಂಧಿತ. ಮೂರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಮಾಹಿತಿ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.