ಬೆಳಗಾವಿ: ಕೊರೊನಾ ವೈರಾಣು ಸೋಂಕು ಹರಡದಂತೆ ನೋಡಿಕೊಳ್ಳುವ ಉದ್ದೇಶದಿಂದ ಇಲ್ಲಿನ ಉದ್ಯಮಬಾಗ ಠಾಣೆ ಪೊಲೀಸರು ವಿನೂತನ ಕ್ರಮಗಳ ಮೊರೆ ಹೋಗಿದ್ದಾರೆ.
ಸಿಪಿಐ ದಯಾನಂದ ಶೇಗುಣಸಿ ಹಾಗೂ ಸಿಬ್ಬಂದಿ ಖಾನಾಪುರ ರಸ್ತೆಯಲ್ಲಿ 'ಕೊರೊನಾ ಡೇಂಜರ್, ನನ್ನಿಂದ ದೂರವಿರಿ' ಎಂದು ಚಿತ್ರ ಬರೆದು ಜಾಗೃತಿ ಮೂಡಿಸುತ್ತಿದ್ದಾರೆ.
ಅನವಶ್ಯವಾಗಿ ರಸ್ತೆಗಿಳಿಯುವ ಜನರಿಗೆ, ದ್ವಿಚಕ್ರ ವಾಹನ ಸವಾರರಿಗೆ ಕೈ ಮುಗಿದು ಮನವಿ ಮಾಡುತ್ತಿದ್ದಾರೆ. ಲಾಕ್ ಡೌನ್ ಆದೇಶ ಉಲ್ಲಂಘಿಸದಂತೆ ಎಚ್ಚರಿಕೆ ನೀಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.