ADVERTISEMENT

ಕೋವಿಡ್‌–19| ರೈಲು ಸೇವೆ ಸ್ಥಗಿತಗೊಳಿಸುವುದಿಲ್ಲ: ಕೇಂದ್ರ ಸಚಿವ ಸುರೇಶ್‌ ಅಂಗಡಿ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 7:22 IST
Last Updated 15 ಮಾರ್ಚ್ 2020, 7:22 IST
ಸುರೇಶ್‌ ಅಂಗಡಿ
ಸುರೇಶ್‌ ಅಂಗಡಿ   

ಬೆಳಗಾವಿ: ಕೊರೊನಾ ವೈರಾಣು ಸೋಂಕು ಭೀತಿ ಇರುವುದರಿಂದಾಗಿ ಕಲಬುರ್ಗಿ ಸೇರಿದಂತೆ ಯಾವುದೇ ಕಡೆಯಲ್ಲೂ ರೈಲುಗಳ ಸೇವೆ ಸ್ಥಗಿತಗೊಳಿಸುವುದಿಲ್ಲ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಿತ್ಯವೂ ರೈಲುಗಳ ಸ್ವಚ್ಛತೆ ಕಾಪಾಡಿಕೊಳ್ಳಲಾಗುತ್ತಿದೆ. ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಪ್ರತಿಕ್ರಿಯಿಸಿದರು.

ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸುರಕ್ಷಿತವಾದ ವಾತಾವರಣ ಇದೆ. ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಹೀಗಾಗಿ, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.