ADVERTISEMENT

ರಾಯಬಾಗ | ಕಾಂಗ್ರೆಸ್‌ನಲ್ಲಿ ಮಿತಿ ಮೀರಿದ ಭ್ರಷ್ಟಾಚಾರ: ಐಹೊಳೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 14:20 IST
Last Updated 23 ಜೂನ್ 2025, 14:20 IST
ರಾಯಬಾಗ ಪಟ್ಟಣದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಹಾಗೂ ಶಾಸಕ ಡಿ.ಎಂ. ಐಹೊಳೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಡವರ ಮನೆಗಳನ್ನು ಹಂಚಿಕೆ ಮಾಡಲು ಲಂಚ ಪಡೆಯುತ್ತಿರುವ ಸರ್ಕಾರದ ಧೋರಣೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರ್ ಸುರೇಶ ಮುಂಜೆ ಅರಿಗೆ ಮನವಿ ಸಲ್ಲಿಸಿದರು
ರಾಯಬಾಗ ಪಟ್ಟಣದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಹಾಗೂ ಶಾಸಕ ಡಿ.ಎಂ. ಐಹೊಳೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಬಡವರ ಮನೆಗಳನ್ನು ಹಂಚಿಕೆ ಮಾಡಲು ಲಂಚ ಪಡೆಯುತ್ತಿರುವ ಸರ್ಕಾರದ ಧೋರಣೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರ್ ಸುರೇಶ ಮುಂಜೆ ಅರಿಗೆ ಮನವಿ ಸಲ್ಲಿಸಿದರು   

ರಾಯಬಾಗ: ‘ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಮಿತಿಮೀರಿದ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯದ ಯಾವುದೇ ಇಲಾಖೆಯಲ್ಲಿ ಸಾರ್ವಜನಿಕರ ಕೆಲಸವಾಗಬೇಕಾದರೆ ಮೊದಲು ಲಂಚಕೋಡಬೇಕಾದ ವಾತಾವರಣವಿದೆ’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ವಿರುದ್ಧ ಪಟ್ಟಣದಲ್ಲಿ ಸೋಮವಾರ ಬಿಜೆಪಿಯಿಂದ ನಡೆದ ಬೃಹತ್ ಪ್ರತಿಭಟನೆಯ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ ಮಾತನಾಡಿ, ‘ಕಾಂಗ್ರೆಸ್ ಕಾರ್ಯಕರ್ತರು ಒಂದು ಮನೆ ಹಂಚಿಕೆಗೆ ಫಲಾನುಭವಿಗಳಿಂದ 10ರಿಂದ 15 ಸಾವಿರ ಹಣ ಪಡೆಯುತ್ತಿರುವುದು ನಾಚಿಕೆಗೇಡು. ಕೂಡಲೇ ಇದರ ತನಿಖೆ ನಡೆಸಬೇಕು. ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು’ ಎಂದರು.

ADVERTISEMENT

ಪ್ರತಿಭಟನಾಕಾರರು ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ನಂತರ  ತಹಶೀಲ್ದಾರ್ ಸುರೇಶ ಮುಂಜೆ ಅವರಿಗೆ ಮನವಿ ಸಲ್ಲಿಸಿದರು.

ಮಂಡಲದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಬಿಜೆಪಿ ಮಂಡಲದ ಅಧ್ಯಕ್ಷರಾದ ಪೃಥ್ವಿರಾಜ್ ಜಾಧವ, ಸಿದ್ದು ಮೂಡಲಗಿ, ಮುಖಂಡರಾದ ಮಹೇಶ ಭಾತೆ, ಸದಾಶಿವ ಘೋರ್ಪಡೆ, ರಾಜು ಹರಗಣ್ಣವರ, ಸದಾನಂದ ಹಳಿಂಗಳಿ, ದುಂಡಪ್ಪ ಭೆಂಡವಾಡೆ, ಅಣ್ಣಾಸಾಬ ಖೇಮಲಾಪೂರೆ, ರಾಜಶೇಖರ ಖನದಾಳೆ, ಬಸವರಾಜ ದೋಣವಾಡೆ, ಅಂಕುಶ ಜಾಧವ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.