ADVERTISEMENT

ದೇಶವನ್ನು ಕೊರೊನಾ ಮುಕ್ತಗೊಳಿಸಬೇಕು: ಮಹೇಶ ಕಂಬಾರ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 13:23 IST
Last Updated 3 ಜುಲೈ 2021, 13:23 IST
ಗೋಕಾಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು
ಗೋಕಾಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು   

ಗೋಕಾಕ (ಬೆಳಗಾವಿ ಜಿಲ್ಲೆ): ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಪ್ರಾಚಾರ್ಯ ಮಹೇಶ ಕಂಬಾರ ಶನಿವಾರ ಚಾಲನೆ ನೀಡಿದರು.

ಕ್ಯಾಂಪಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶವನ್ನು ಕೊರೊನಾ ಮುಕ್ತಗೊಳಿಸಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಲಸಿಕೆ ಪಡೆದುಕೊಂಡು ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು.

‘ಇಲ್ಲಿ 1,378 ವಿದ್ಯಾರ್ಥಿಗಳಿದ್ದಾರೆ. ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಲಸಿಕೆ ನೀಡಲಾಗುತ್ತಿದೆ. ಜುಲೈ 7ರವರೆಗೆ ಅಭಿಯಾನ ನಡೆಯಲಿದೆ’ ಎಂದು ತಿಳಿಸಿದರು.

ADVERTISEMENT

ಉಪನ್ಯಾಸಕರಾದ ಪಿ.ಎ. ಲಕ್ಷೆಟ್ಟಿ, ಡಾ.ಸುನಂದಾ ಮಾದರ, ವಿ.ಐ. ತಿಳಗಂಜಿ, ವಿಜಯ ಹುಣಚ್ಯಾಳಿ, ಚಿದಾನಂದ ಶಿಂಗೆ, ಸಿಬ್ಬಂದಿ ಶರೀಫ ಮಾವುತ, ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.