ಬೈಲಹೊಂಗಲ(ಬೆಳಗಾವಿ ಜಿಲ್ಲೆ): ಸಮೀಪದ ಹೊಸೂರ ಗ್ರಾಮದ ರೈತ ದೇವೇಂದ್ರಪ್ಪ ಜಾಧವ ಅವರ ಜಮೀನಿನಲ್ಲಿ ಪ್ರತ್ಯಕ್ಷವಾದಮೊಸಳೆಯನ್ನು ಗ್ರಾಮಸ್ಥರು ಭಾನುವಾರ ಸೆರೆಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದರು.
ಕಳೆದ ಒಂದು ವಾರದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮಲಪ್ರಭಾ ನದಿಯಲ್ಲಿ ತೇಲಿ ಬಂದ ಮೊಸಳೆ ಕೃಷಿ ಭೂಮಿಗೆ ನುಗ್ಗಿತ್ತು.ಇದನ್ನು ಕಂಡ ರೈತರು ಕೆಲಕಾಲ ಗಾಬರಿಯಾದರು. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಮೊಸಳೆ ಸೆರೆಹಿಡಿದರು.
ಮೊಸಳೆ ಸೆರೆಯಾದ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.