ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಆಜೂರ ಗ್ರಾಮದ ರೈತ ನವನಾಥ ಮಾನೆ ಎನ್ನುವವರು ಎರಡು ಎಕರೆಯಲ್ಲಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಶುಕ್ರವಾರ ಕಡಿದು ಹಾಕಿದ್ದಾರೆ. ‘ಸರಿಯಾದ ಬೆಲೆ ಮತ್ತು ಮಾರುಕಟ್ಟೆ ಸಿಗದಿರುವುದು ಹಾಗೂ ರೋಗ ಬಾಧೆಯಿಂದ ಕಂಗೆಟ್ಟು ಈ ನಿರ್ಧಾರಕ್ಕೆ ಬರಬೇಕಾಯಿತು’ ಎಂದು ತಿಳಿಸಿದ್ದಾರೆ.
‘ಹವಾಮಾನ ವೈಪರೀತ್ಯದಿಂದ ಬೆಳೆಗೆ ಹಲವು ರೋಗಗಳ ಬಾಧೆ ಕಾಣಿಸಿಕೊಳ್ಳುತ್ತಿದೆ. ಬೆಳೆಯಲು ₹ 3 ಲಕ್ಷದಿಂದ ₹ 4 ಲಕ್ಷ ವೆಚ್ಚವಾಗಿದೆ. ಆರು ವರ್ಷಗಳಿಂದ ಗಿಡಗಳನ್ನು ಬೆಳೆಸುತ್ರಿದ್ದೆ. ಪ್ರತಿ ವರ್ಷವೂ ನಷ್ಟವೇ ಆಗಿದೆ. ಕೈಗೆ ಬಂದ ಅಲ್ಪ ಸ್ವಲ್ಪ ಫಸಲಿಗೆ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಸರಿಯಾದ ಬೆಲೆ ಸಿಗಲಿಲ್ಲ. ಮಾರುಕಟ್ಟೆಯೂ ಇರಲಿಲ್ಲ’ ಎಂದು ತಿಳಿಸಿದರು.
‘ತಾಲ್ಲೂಕಿನ ಹಲವರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲವರು ಕೀಟನಾಶಕಗಳನ್ನು ಸಿಂಪಡಿಸಿ ರೋಗ ಬಾಧೆಯನ್ನು ಹತೋಟಿಗೆ ತರುತ್ತಾರೆ. ನನಗೆ ಖರ್ಚು ಭರಿಸುವ ಶಕ್ತಿ ಇಲ್ಲವಾದ್ದರಿಂದ ಗಿಡಗಳನ್ನು ನಾಶಪಡಿಸುತ್ತಿದ್ದೇನೆ. ಮುಂದೇನು ಮಾಡಬೇಕು ಎನ್ನುವುದು ತೋಚದಂತಾಗಿದೆ. ಸರ್ಕಾರವು ಪರಿಹಾರ ನೀಡಿದರೆ ಅನುಕೂಲವಾಗುತ್ತದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.