ADVERTISEMENT

ಬೆಳೆ ವಿಮೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 13:26 IST
Last Updated 24 ಜೂನ್ 2021, 13:26 IST
ತೆಲಸಂಗದಲ್ಲಿ ಬೆಳೆ ವಿಮೆ ಪ್ರಚಾರ ವಾಹನಕ್ಕೆ ತೋಟಗಾರಿಕೆ ಅಧಿಕಾರಿ ಅಕ್ಷಯಕುಮಾರ ಉಪಾಧ್ಯಾಯ ಚಾಲನೆ ನೀಡಿದರು
ತೆಲಸಂಗದಲ್ಲಿ ಬೆಳೆ ವಿಮೆ ಪ್ರಚಾರ ವಾಹನಕ್ಕೆ ತೋಟಗಾರಿಕೆ ಅಧಿಕಾರಿ ಅಕ್ಷಯಕುಮಾರ ಉಪಾಧ್ಯಾಯ ಚಾಲನೆ ನೀಡಿದರು   

ತೆಲಸಂಗ (ಬೆಳಗಾವಿ ಜಿಲ್ಲೆ): ‘ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಮುಂಗಾರಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಮಾಡಿಸಲು ಜೂನ್‌ 30 ಕೊನೆಯ ದಿನವಾಗಿದ್ದು, ರೈತರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತೆಲಸಂಗ ತೋಟಗಾರಿಕೆ ಅಧಿಕಾರಿ ಅಕ್ಷಯಕುಮಾರ ಉಪಾಧ್ಯಾಯ ಹೇಳಿದರು.

ಗ್ರಾಮದಲ್ಲಿ ಬೆಳೆ ವಿಮೆ ಬಗ್ಗೆ ಜಾಗೃತಿಗಾಗಿ ಭಿತ್ತಿಪತ್ರ ಬಿಡುಗಡೆ ಮಾಡಿ, ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಬೆಳೆ ವಿಮೆ ಮಹತ್ವದ್ದಾಗಿದೆ. ರೈತರ ಸಂಕಷ್ಟವನ್ನು ದೂರ ಮಾಡುವ ಈ ಯೋಜನೆಯಿಂದ ವಂಚಿತರಾಗಬಾರದು’ ಎಂದರು.

ADVERTISEMENT

ಅಂಬರೀಷ ಕಂದಾರೆ, ಗೋಪಾಲ ಶೆಲ್ಲೆಪ್ಪಗೋಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.