ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನ.29ರಂದು ಜಿಲ್ಲೆಯ ವಿಧಾನಪರಿಷತ್ ಚುನಾವಣಾ ಅಖಾಡಕ್ಕೆ ಧುಮುಕಲಿದ್ದಾರೆ.
ನ.28ರಂದು ರಾತ್ರಿ ನಗರಕ್ಕೆ ಬಂದು ತಂಗುವರು. 29ರಂದು ಬೆಳಿಗ್ಗೆ 9ರಿಂದ ಪಕ್ಷದ ಮುಖಂಡರೊಂದಿಗೆ ಚರ್ಚಿಸುವರು. ಮಧ್ಯಾಹ್ನ 2ಕ್ಕೆ ವಿಜಯಪುರಕ್ಕೆ ತೆರಳುವರು.
ಈ ನಡುವೆ, ಶಾಸಕ ಎನ್.ಎ. ಹ್ಯಾರಿಸ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ಕೆಪಿಸಿಸಿಯಿಂದ ನೇಮಕ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.