ಬೆಳಗಾವಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಬೆಳಗಾವಿ ಜಿಲ್ಲೆಗೆ ದೇಶದಲ್ಲಿಯೇ ಹತ್ತನೇ ರ್ಯಾಂಕ್ ಸಿಕ್ಕ ಹಿನ್ನೆಲೆಯಲ್ಲಿ, ನವದೆಹಲಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಗೌರವಿಸಿ ಪ್ರಶಸ್ತಿ ನೀಡಲಾಯಿತು.
ಈ ವೇಳೆ ಮಾತನಾಡಿದ ನಿತೇಶ್, ‘ಈ ರ್ಯಾಂಕ್ ನಮಗೆ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕ ಹಾಗೂ ಪರಿಣಾಮಕಾರಿ ಅನುಷ್ಠಾಠನಗೊಳಿಸಲು ಪ್ರೇರೇಪಿಸಿದೆ’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಚ್.ವಿ. ದರ್ಶನ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪ ಅವರೂ ಪ್ರಶಸ್ತಿ, ಪ್ರಮಾಣ ಪತ್ರಗಳನ್ನು ಸ್ವೀಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.